ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಆಗಮಿಸದೇ ಇದ್ದಿದ್ದನ್ನು ಆಕ್ಷೇಪಿಸಿದ್ದ ಉಪಮುಖ್ಯಮಂತ್ರಿ ಪರಮೇಶ್ವರ್, ಸಿನಿಮಾ ನಟರನ್ನು ಭೇಟಿ ಮಾಡಲು, ಉದ್ಯಮಿಗಳ ಮಕ್ಕಳ ಮದುವೆಗೆ ಹೋಗಲು ಮೋದಿ ಸಮಯ ಇರುತ್ತದೆ. ಆದರೆ ಶತಾಯುಷಿ, ತ್ರಿವಿಧ ದಾಸೋಹಿ, ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸಲು ಮೋದಿಗೆ ಸಮಯವಿರಲಿಲ್ಲ ಎಂದು ಟ್ವೀಟರ್ ಮೂಲಕ ಟಾಂಗ್ ನೀಡಿದ್ದರು.