ನಾನು ಸ್ವತಃ ಬಡತನವನ್ನು ಅನುಭವಿಸಿದ್ದೇನೆ. ಬಡವರನ್ನು ಮೇಲೇತ್ತುವ ಅತ್ಯುತ್ತಮ ಮಾರ್ಗವೆಂದರೆ ಅವರಿಗೆ ಅಧಿಕಾರ ನೀಡುವುದು. ಈ ಕಾರಣಕ್ಕಾಗಿಯೇ ಜನ ನನ್ನನ್ನು ಪ್ರಧಾನಿಯನ್ನಾಗಿ ಮಾಡಿದ್ದಾರೆ. ಈ ಮೂಲಕ ಬಡವರ ಸೇವೆ ಮಾಡುವ ಅವಕಾಶ ನೀಡಿದ್ದಾರೆ. ಬಡವರಿಗೆ, ಸಾಮಾನ್ಯ ಜನಕ್ಕೆ ಹಾಗೂ ಮಹಿಳೆಯರಿಗೆ ಅಧಿಕಾರ ನೀಡುವುದೇ ನನ್ನ ಉದ್ದೇಶ. ಆದಾಯ ಹೆಚ್ಚಿಸುವುದಕ್ಕಾಗಿ ನಾವು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಪ್ರಧಾನಿ ಮೋದಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ. ಅಲ್ಲದೆ ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಉಜ್ವಲ್ ಯೋಜನೆ, ಸೌಭಾಗ್ಯ ಯೋಜನೆ ಹಾಗೂ ಜ್ಯೋತಿ ಭೀಮ ಯೋಜನೆಯ ಲಾಭಗಳ ಬಗ್ಗೆಯೂ ಪ್ರಧಾನಿ ಮೋದಿತಮ್ಮ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.