ಕಳೆದ ನಾಲ್ಕುವರೆ ವರ್ಷಗಳಲ್ಲಿ ಪ್ರಧಾನಿ ಮೋದಿಗೆ ನೀಡಿದ ಎಲ್ಲಾ ಉಡುಗೊರೆಗಳನ್ನು ಜನವರಿ 27 ಮತ್ತು 28 ರಂದು ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ನಲ್ಲಿ ಹರಾಜು ಹಾಕಲಾಗುತ್ತಿದ್ದು, ಇದರಿಂದ ಸಂಗ್ರಹವಾಗುವ ಮೊತ್ತವನ್ನು ಗಂಗಾ ನದಿ ಶುದ್ಧೀಕರಣ(ನಮಾಮಿ ಗಂಗೆ) ಯೋಜನೆಗೆ ಬಳಸಲಾಗುತ್ತದೆ ಎಂದು ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ ಡಾ.ಮಹೇಶ್ ಶರ್ಮಾ ಅವರು ತಿಳಿಸಿದ್ದಾರೆ.