ಫೆ.04 ರಂದು ಪ್ರಿಯಾಂಕ ಗಾಂಧಿ ಕುಂಭಮೇಳದಲ್ಲಿ ಭಾಗವಹಿಸಲಿದ್ದು, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಕೆಲವೇ ದಿನಗಳ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪ್ರಿಯಾಂಕ ಗಾಂಧಿ, ಉತ್ತರ ಪ್ರದೇಶದ ಪೂರ್ವ ಭಾಗದ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು. ಈಗ ಫೆ.04 ರಂದು ರಾಹುಲ್ ಗಾಂಧಿ ಜೊತೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.