ನವದೆಹಲಿ: ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಆಡಳಿತಾ ಬಿಜೆಪಿ ಪಕ್ಷ ಭಾರತೀಯರನ್ನು ಇಬ್ಬಾಗಿಸಿದ್ದು, ರಾಫೆಲ್ ಹಗರಣ, ಅನಿಲ್ ಅಂಬಾನಿ, ನಿರಾವ್ ಮೋದಿ, ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಒಂದು ಕಡೆ ಇದ್ದರೆ ಇತರ ಬಡ ರೈತರು ಮತ್ತೊಂದು ಕಡೆಯಲ್ಲಿ ಇದ್ದಾರೆ ಎಂದು ಆರೋಪಿಸಿದರು.
15 ವರ್ಷದ ನಂತರ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನೆರವಾದ ರೈತರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಚಾರಿತ್ರಿಕ ನಿರ್ಧಾರ ಕೈಗೊಳ್ಳಲಿದೆ. ದೇಶದಲ್ಲಿನ ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯ ಒದಗಿಸಲಾಗುವುದು, ಇದರಿಂದಾಗಿ ದೇಶದಲ್ಲಿನ ಬಡ ಜನರು ಹಸಿವು ಮುಕ್ತರಾಗಲಿದ್ದಾರೆ ಎಂದರು.
Advertisement