ಪ್ರಯಾಗ್ ರಾಜ್ : ಕುಂಭ ಮೇಳದಲ್ಲಿ ಸಂಪುಟ ಸಭೆ,ವಿಶ್ವದ ಅತ್ಯಂತ ಉದ್ದದ ಎಕ್ಸ್ ಪ್ರೆಸ್ ವೇ ನಿರ್ಮಾಣ- ಯೋಗಿ

ಕುಂಭ ಮೇಳ ವೇದಿಕೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಯಿತು
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on
ಪ್ರಯಾಗ್ ರಾಜ್ : ಕುಂಭ ಮೇಳ ವೇದಿಕೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಯಿತು.
ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಲಖನೌ ಹೊರಗಡೆ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಹೆಚ್ಚಾಗಿ ಹಿಂದೂ ಧರ್ಮಿಯರು ಸೇರುವ ಕುಂಭ ಮೇಳಕ್ಕೆ ಮತ್ತಷ್ಟು ಹೆಸರು ತಂದುಕೊಡುವ ನಿಟ್ಟಿನಲ್ಲಿ  ಸಂಪುಟ ಸಭೆ ನಡೆಸಲಾಗಿದ್ದು, ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಸಂಪುಟ ಸಭೆ ಬಳಿಕ  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಪ್ರಯಾಗ್ ರಾಜ್ ಮತ್ತು ಪೂರ್ವ ಉತ್ತರ ಪ್ರದೇಶ ಸಂಪರ್ಕಿಸುವ  ಗಂಗಾ ಎಕ್ಸ್ ಪ್ರೆಸ್ ವೇ ನಿರ್ಮಿಸಲು ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
600 ಕಿ. ಮೀ. ಉದ್ದದ ಈ ಹೆದ್ದಾರಿ ವಿಶ್ವದಲ್ಲಿಯೇ ಅತ್ಯಂತ ಉದ್ದವಾದ ಹೆದ್ದಾರಿಯಾಗಲಿದ್ದು,  6,556 ಹೆಕ್ಟರ್ ಭೂಮಿ ಸ್ವಾಧೀನಪಡಿನಪಡಿಸಿಕೊಳ್ಳಬೇಕಾಗುತ್ತದೆ. ಇದಕ್ಕೆ ಸುಮಾರು 36 ಸಾವಿರ ಕೋಟಿ ರೂ.ಅಂದಾಜು ವೆಚ್ಚವಾಗಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com