"2018-19 ಮುಂಗಾರಿನಲ್ಲಿ ಬರ ಪೀಡಿತ ಪ್ರದೇಶಗಳಿಗೆ ನೆರವು ನೀಡಲು ಕರ್ನಾಟಕಕ್ಕೆ 949.49 ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ" ಎಂದು ಸಚಿವರು ಹೇಳಿದ್ದಾರೆ. 2018 ರ ಅಕ್ಟೋಬರ್ ನಲ್ಲಿ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ ಕೇಂದ್ರದಿಂದ 2,424 ಕೋಟಿ ರೂಪಾಯಿ ನೆರವು ಕೇಳಿತ್ತು.