ನವದೆಹಲಿ: ಮಾಜಿ ಕೇಂದ್ರ ಸಚಿವ, ಹಿರಿಯ ರಾಜಕಾರಣಿ ಜಾರ್ಜ್ ಫರ್ನಾಂಡಿಸ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕೇಂದ್ರ ಸರ್ಕಾರದಲ್ಲಿ ಹಲವು ಸಚಿವ ಸ್ಥಾನಗಳನ್ನು ಅಲಂಕರಿಸಿದ್ದ ಜಾರ್ಜ್ ಅವರದ್ದು ಸರಳ ವ್ಯಕ್ತಿತ್ವ ಉನ್ನತ ಮಟ್ಟದ ಚಿಂತನೆ ಹೊಂದಿದವರಾಗಿದ್ದರು. ದೇಶದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಜಾಪ್ರಭುತ್ವವನ್ನು ಎತ್ತಿಹಿಡಿದಿದ್ದರು ಎಂದು ರಾಷ್ಟ್ರಪತಿ ಸ್ಮರಿಸಿದ್ದಾರೆ.
Advertisement