ಇದಕ್ಕೂ ಮುನ್ನ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನೆರವಾದ ರೈತರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನ ಹಾಗೂ ಹಸಿವಿನಿಂದ ಮುಕ್ತಗೊಳಿಸಲು ದೇಶದಲ್ಲಿನ ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು. ಇದು ಕಾಂಗ್ರೆಸ್ ಪಕ್ಷದ ಭರವಸೆ ಎಂದಿದ್ದರು.