ಇಂದು ನಡೆದ ಹಿಂದೂ ಸಾಧು ಸಂತರ ಸಮಾವೇಶ ಪರಮಧರ್ಮ ಸಂಸದ್ ನಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನಗೊಂಡಿದ್ದರು. ಅಲ್ಲದೆ ಬಿಜೆಪಿಗೆ ಆರ್ಎಸ್ಎಸ್ ಗೆ ಕಾಯದೆ ತಾವೇ ರಾಮ ಮಂದಿರ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲು ಈ ಧರ್ಮ ಸಂಸದ್ ನಿರ್ಧರಿಸಿದೆ. ಸ್ವಾಮಿ ಸ್ವರೂಪಾನಂದ ಅವರಿಗೆ ಈ ಹೊಸ ಹೋರಾಟದ ನೇತೃತ್ವ ವಹಿಸಲಾಗಿದ್ದು ಸ್ವಾಮಿ ಸ್ವರೂಪನಂದ ಅವರು ಫೆಬ್ರವರಿ 21ರಂದು ಅಯೋಧ್ಯೆಯ ವಿವಾದಿತ ಜಾಗದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ.