ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ತಿದ್ದುಪಡಿ ಕಾಯ್ದೆಯಲ್ಲಿ "ಜಾಮೀನು ರಹಿತ" ಎಂಬ ಅಂಶವನ್ನು ಕಾಯ್ದೆಯಲ್ಲಿ ಮರುಸ್ಥಾಪಿಸಲಾಗಿತ್ತು. ನ್ಯಾ.ಯುಯು ಲಲಿತ್ ನೇತೃತ್ವದ ಪೀಠ ಈ ವಿಷಯದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದು ಕೇಂದ್ರ ಸರ್ಕಾರದ ಮರುಪರಿಶೀಲನಾ ಅರ್ಜಿಯೂ ಸೇರಿದಂತೆ ಸಂಬಂಧಪಟ್ಟ ಎಲ್ಲಾ ವಿಷಯಗಳನ್ನೂ ಫೆ.19 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.