ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶದಲ್ಲಿ ಪುರಸಭೆ ಅಧಿಕಾರಿಯೊಬ್ಬರ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಹಿರಿಯ ನಾಯಕ ಕೈಲಾಷ್ ವಿಜಯ್ ವರ್ಗೀಯ ಪುತ್ರ ಶಾಸಕ ಆಕಾಶ್ ವಿಜಯ್ ವರ್ಗೀಯ ವರ್ತನೆಯ ಬಗ್ಗೆ ಆಸಂತೋಷ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿತ್ತು, ಹಲ್ಲೆ ನಡೆಸಿದ ವ್ಯಕ್ತಿ ಎಂತಹ ದೊಡ್ಡ ನಾಯಕ ಮಗನೇ ಇರಬಹುದು ಆತನ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.