ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಮಾನನಷ್ಟ ಮೊಕದ್ದಮೆ ಕೇಸು ಕೈ ಬಿಟ್ಟ ನ್ಯಾಯಾಲಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಸಂಸದ ...
Updated on
ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮುಂಬೈಯ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಈ ಮೂಲಕ ರಾಹುಲ್ ಗಾಂಧಿಗೆ ಕೇಸಿನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.
15 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್‌ ಪಡೆದುಕೊಂಡು ನ್ಯಾಯಾಲಯ ಆರೋಪ ಮುಕ್ತಗೊಳಿಸಿದ್ದು ಮಾಜಿ ಸಂಸದ ಏಕನಾಥ್ ಗಾಯಕ್ ವಾಡ್ ರಾಹುಲ್ ಗಾಂಧಿಯವರ ಪರ ಸಹಿ ಹಾಕಿದರು. 
ಇಂದು ಬೆಳಗ್ಗೆ ಮುಂಬೈಯ ಶಿವಡಿ ಕೋರ್ಟ್ ಗೆ ರಾಹುಲ್ ಗಾಂಧಿ ಮತ್ತವರ ವಕೀಲರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾದರು. 
ಚುನಾವಣೆ ಪ್ರಚಾರದ ವೇಳೆ ಆಡಳಿತ ಪಕ್ಷದ ನಾಯಕರನ್ನು ಟೀಕಿಸುವಾಗ ರಾಹುಲ್ ಗಾಂಧಿಯವರು ಹೀಗೆ ಹೇಳಿದ್ದು, ಗೌರಿ ಲಂಕೇಶ್ ಹತ್ಯೆಗೆ ಬಿಜೆಪಿ-ಆರ್ ಎಸ್ಎಸ್ ಸಿದ್ದಾಂತಗಳು ಮತ್ತು ಅವುಗಳನ್ನು ಹಿಂಬಾಲಿಸುವವರು ಕಾರಣ ಎಂದು ಹೇಳಿದ್ದರಷ್ಟೆ ಹೊರತು ಇಂತವರೇ ಹತ್ಯೆಗೆ ಕಾರಣ ಎಂದು ಯಾವೊಬ್ಬ ವ್ಯಕ್ತಿಯ ಮೇಲೆ ನಿರ್ದಿಷ್ಟ ಆರೋಪ ಮಾಡಿಲ್ಲ,ಹೀಗಾಗಿ ಅವರ ವಿರುದ್ಧ ಕೇಸು ದಾಖಲಿಸುವ ಯಾವುದೇ ನಿರ್ದಿಷ್ಟ ಗುರುತರ ಸಾಕ್ಷಿಗಳಿಲ್ಲ ಎಂದು ಹೇಳಿ ನ್ಯಾಯಾಲಯ ಅವರನ್ನು ಆರೋಪ ಮುಕ್ತಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com