ಅಧಿಕಾರಿ ಮೇಲೆ ಹಲ್ಲೆ: ಮಹಾ ಎನ್ ಸಿಪಿ ಶಾಸಕನ ವಿರುದ್ಧ ಕೇಸ್ ದಾಖಲು

ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರಿಬ್ಬರು ಜೈಲಿಗೆ ಹೋಗಿ ಬಂದ ಬೆನ್ನಲ್ಲೇ ನಗರ ಪಾಲಿಕೆ ಅಧಿಕಾರಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಔರಂಗಬಾದ್: ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರಿಬ್ಬರು ಜೈಲಿಗೆ ಹೋಗಿ ಬಂದ ಬೆನ್ನಲ್ಲೇ ನಗರ ಪಾಲಿಕೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದ ಎನ್ ಸಿಪಿ ಶಾಸಕರೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಜಿಂತೂರ್ ನಗರ ಪಾಲಿಕೆಯ ತೆರಿಗೆ ಇಲಾಖೆ ಅಧಿಕಾರಿ ಡಿವಿ ತಲೆಕಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜಿಂತೂರ್ ಎನ್ ಸಿಪಿ ಶಾಸಕ ವಿಜಯ್ ಭಂಬಲೆ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶಾಲೆಯ ಆಸ್ತಿ ತೆರಿಗೆ ಮತ್ತು ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನ್ನು ಮನೆಗೆ ಕರೆಸಿದ್ದ ಶಾಸಕರು, ಶಾಲೆಯ ಆಸ್ತಿ ತೆರಿಗೆ ಮತ್ತು ನೀರಿನ ಬಿಲ್ ಮನ್ನಾ ಮಾಡುವಂತೆ ಒತ್ತಡ ಹೇರಿದರು. ಇದಕ್ಕೆ ಒಪ್ಪದಿದ್ದಾಗ ನನ್ನನ್ನು ನಿಂದಿಸಿ, ಹಲ್ಲೆ ನಡೆಸಿದರು ಎಂದು ಅಧಿಕಾರಿ ತಲೆಕರ್ ಆರೋಪಿಸಿದ್ದಾರೆ.
ತಲೆಕರ್ ನೀಡಿದ ದೂರಿನ ಆಧಾರದ ಮೇಲೆ ನಾವು ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ಮಧ್ಯ ಪ್ರದೇಶದಲ್ಲಿ ಬಿಜೆಪಿ ಶಾಸಕ ಆಕಾಸ್ ವಿಜಯ್ ವರ್ಗಿಯಾ ಅವರು ಅಧಿಕಾರಿ ಮೇಲೆ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದರು. ಅಲ್ಲದೆ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಿತೇಶ್ ರಾಣೆ ಅವರು ಇಂಜಿನಿಯರ್ ಮೇಲೆ ಕೇಸರು ಸುರಿದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com