2006ರ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಪವನ್ ರಾಜೇ ನಿಂಬಾಳ್ಕರ್ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ಹೇಳಲು ಅಣ್ಣಾ ಹಜಾರೆ ಅವರು ನ್ಯಾಯಮೂರ್ತಿಗಳಾದ ಆನಂದ್ ಯಾವಲ್ಕರ್ ನೇತೃತ್ವದ ಸಿಬಿಐ ವಿಶೇಷ ಕೋರ್ಟ್ ಎದುರು ಹಾಜರಾಗಿ ಈ ಹೇಳಿಕೆ ನೀಡಿದ್ದಾರೆ. ಮಾಜಿ ಸಚಿವ ಮತ್ತು ಎನ್ ಸಿಪಿ ನಾಯಕ ಪದಮ್ ಸಿಂಹ ಪಾಟೀಲ್, 2006 ರಲ್ಲಿ ಅವರ ಸೋದರ ಸಂಬಂಧಿ ಪವನ್ ರಾಜೇ ನಿಂಬಲ್ಕರ್ ಅವರ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾರೆ. ಉಸ್ಮಾನಾಬಾದ್ ಮೂಲದ ಸಕ್ಕರೆ ಕಾರ್ಖಾನೆಯೊಂದಿಗೆ ಸಂಬಂಧ ಹೊಂದಿದ್ದು, ಪ್ರಸ್ತುತ ಟೆರ್ನಾ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾಗಿದ್ದಾರೆ ಎನ್ನಲಾಗಿದೆ.