ಪುತ್ರನ ಮೂಲಕ ಕ್ರಮಬದ್ಧ ರಾಜೀನಾಮೆ ಪತ್ರ ಸಲ್ಲಿಸಿದ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್

ಮುಂಬೈನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಅವರು ತಮ್ಮ ಪುತ್ರ ವಿವೇಕ್ ಮೂಲಕ ಸ್ಪೀಕರ್ ರಮೇಶ್ ಕುಮಾರ್...
ಶಿವರಾಮ್ ಹೆಬ್ಬಾರ್
ಶಿವರಾಮ್ ಹೆಬ್ಬಾರ್
Updated on
ಬೆಂಗಳೂರು: ಮುಂಬೈನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಅವರು ತಮ್ಮ ಪುತ್ರ ವಿವೇಕ್ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಕ್ರಮಬದ್ಧವಾದ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.
ಇಂದು ಕ್ರಮಬದ್ಧವಾದ ರಾಜೀನಾಮೆ ಪತ್ರದೊಂದಿಗೆ ಸ್ಪೀಕರ್ ಕಚೇರಿಗೆ ಬಂದ ಪುತ್ರ ವಿವೇಕ್ ಹೆಬ್ಬಾರ್ ಅವರು ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಯವರಿಗೆ ಪತ್ರ ಸಲ್ಲಸಿದರು.
ಮತ್ತೊಬ್ಬ ಅತೃಪ್ತ ಕಾಂಗ್ರೆಸ್ ಶಾಸಕ ಭೈರತಿ ಬಸವರಾಜ್ ಅವರು ಸಹ ತಮ್ಮ ಆಪ್ತ ಸಹಾಯಕನ ಮೂಲಕ ಕ್ರಮಬದ್ಧವಾದ ರಾಜೀನಾಮೆ ಪತ್ರವನ್ನು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಕಳುಹಿಸಿದ್ದಾರೆ. ಆದರೆ ಈ ರೀತಿ ಬೇರೆಯವರ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದರೆ ಅದನ್ನು ಪರಿಗಣಿಸುವುದಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಹೇಳಿದ್ದಾರೆ.
ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಎಂಟು ಅತೃಪ್ತ ಶಾಸಕರ ರಾಜೀನಾಮೆ ಪತ್ರ ಕ್ರಮಬದ್ಧವಾಗಿಲ್ಲ ಎಂದು ಹೇಳಿದ್ದರು. ಈ ಪೈಕಿ ಶಿವರಾಂ ಹೆಬ್ಬಾರ್ ಹಾಗೂ ಭೈರತಿ ಬಸವರಾಜ್ ರಾಜೀನಾಮೆ ಪತ್ರ ಕ್ರಮ‌ಬದ್ಧವಾಗಿಲ್ಲ ಎಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com