ದೆಹಲಿ ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿರುವ ವಿಜೇಂದರ್ ಗುಪ್ತಾ ತಮ್ಮ ದೂರಿನಲ್ಲಿ, ಆಮ್ ಆದ್ಮಿ ಪಕ್ಷದ ಈ ಇಬ್ಬರು ನಾಯಕರ ಹೇಳಿಕೆಗಳ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಗಳು ಮತ್ತು ಟ್ವೀಟ್ ಗಳು ವ್ಯಾಪಕವಾಗಿ ಹರಿದಾಡುತ್ತಿದ್ದು ಇವುಗಳಿಂದಾಗಿ ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯುಂಟಾಗಿದೆ, ಈ ಘಟನೆ ಬಳಿಕ ಅರವಿಂದ ಕೇಜ್ರಿವಾಲ್ ಆಗಲಿ ಮನೀಶ್ ಸಿಸೋಡಿಯಾ ಆಗಲಿ ತಮ್ಮಲ್ಲಿ ಕ್ಷಮೆ ಕೇಳುವುದಾಗಿ ವಿಷಾದ ವ್ಯಕ್ತಪಡಿಸುವುದಾಗಲಿ ಮಾಡಿಲ್ಲ ಎಂದು ತಿಳಿಸಿದ್ದರು.