ನವದೆಹಲಿ: ಉತ್ತರ ಪ್ರದೇಶ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹಿಂದೂಳಿದ ವರ್ಗಗಳ ನಾಯಕ ಸ್ವತಂತ್ರ ದೇವ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಮಹೇಂದ್ರ ನಾಥ್ ಪಾಂಡೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಸೇರಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ದೇವ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದ ಒಬಿಸಿ ಸಮುದಾಯಕ್ಕೆ ಪ್ರಾತಿನಿದ್ಯ ನೀಡಲು ಹಿಂದೂಳಿದ ವರ್ಗಗಳ ಪ್ರಬಲ ಕುರ್ಮಿ ಸಮುದಾಯಕ್ಕೆ ಸೇರಿದ ದೇವ್ ಸಿಂಗ್ ಅವರನ್ನು ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.