ಭಾರತೀಯ ನಾಗರಿಕ ವಿಮಾನಗಳಿಗೆ ವಾಯು ಪ್ರದೇಶ ನಿರ್ಬಂಧ ತೆರವುಗೊಳಿಸಿದ ಪಾಕ್

ಪಾಕಿಸ್ತಾನ ಗಡಿಯಲ್ಲಿ ಭಾರತ ನಿಯೋಜಿಸಿರುವ ಯುದ್ಧವಿಮಾನಗಳನ್ನು ಹಿಂಪಡೆಯುವವರೆಗೆ ತನ್ನ ವಾಯು ಪ್ರದೇಶದಲ್ಲಿ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಪಾಕಿಸ್ತಾನ ಗಡಿಯಲ್ಲಿ ಭಾರತ ನಿಯೋಜಿಸಿರುವ ಯುದ್ಧವಿಮಾನಗಳನ್ನು ಹಿಂಪಡೆಯುವವರೆಗೆ ತನ್ನ ವಾಯು ಪ್ರದೇಶದಲ್ಲಿ ಭಾರತದ ನಾಗರಿಕ ವಿಮಾನದ ಸಂಚಾರಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದ ಪಾಕಿಸ್ತಾನ, ಈಗ ತನ್ನ ಹಠ ಸಡಿಲಿಸಿ, ವಾಯುಪ್ರದೇಶವನ್ನು ಎಲ್ಲಾ ರೀತಿಯ ನಾಗರಿಕ ಸಂಚಾರಕ್ಕೆ ಮುಕ್ತವಾಗಿಸುವುದಾಗಿ ಘೋಷಿಸಿದೆ.
ಪಾಕಿಸ್ತಾನದ ಈ ನಿರ್ಧಾರವನ್ನು ಭಾರತದ ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಿ ಸ್ವಾಗತಿಸಿದ್ದಾರೆ. 'ಇದು ಉತ್ತಮ ಸುದ್ದಿ. ಇದರಿಂದ ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲಿದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದರಿಂದ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ನೆರವಾಗಲಿದೆ. ಇತ್ತೀಚೆಗಷ್ಟೇ ಅಮೆರಿಕದ ಏರ್ ಲೈನ್ಸ್ ಸಂಸ್ಥೆ, ಪಾಕಿಸ್ತಾನದ ವಾಯು ಪ್ರದೇಶದ ನಿರ್ಬಂಧದ ಹಿನ್ನೆಲೆಯಲ್ಲಿ ಅಕ್ಟೋಬರ್ 26ರವರೆಗೆ ಅಮೆರಿಕದಿಂದ ದೆಹಲಿ ಹಾಗೂ ಮುಂಬೈಗೆ ಪ್ರಯಾಣಿಸುವ ವಿಮಾನ ಸಂಚಾರವನ್ನು ರದ್ದುಗೊಳಿಸುವುದಾಗಿ ಪ್ರಕಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com