ಗುರುಪೂರ್ಣಿಮೆ: ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪಿಎಂ ಮೋದಿ

ಗುರುಪೂರ್ಣಿಮೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಉಡುಪಿ ಪೇಜಾವರ ಮಠದ ಹಿರಿಯ ಗುರುಗಳಾದ ತಮ್ಮ ಪ್ರೀತಿಯ ಆಧ್ಯಾತ್ಮಿಕ ಗುರು ವಿಶ್ವೇಶ ತೀರ್ಥ ಸ್ವಾಮಿಯನ್ನು ಭೇಟಿಯಾದರು.
ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪಿಎಂ ಮೋದಿ
ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪಿಎಂ ಮೋದಿ
Updated on
ನವದೆಹಲಿ: ಗುರುಪೂರ್ಣಿಮೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಉಡುಪಿ ಪೇಜಾವರ ಮಠದ ಹಿರಿಯ ಗುರುಗಳಾದ ತಮ್ಮ ಪ್ರೀತಿಯ ಆಧ್ಯಾತ್ಮಿಕ ಗುರು ವಿಶ್ವೇಶ ತೀರ್ಥ ಸ್ವಾಮಿಯನ್ನು ಭೇಟಿಯಾದರು.
ತಾವು ಶ್ರೀಗಳನ್ನು ಭೇಟಿಯಾದ  ಕುರಿತು ಮೋದಿ ತಮ್ಮ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
:ಇಂದಿನ ದಿನ ಗುರುಪೂರ್ಣಿಮಾ ಆಗಿದ್ದು ವಿಶೇಷ ದಿನವಾಗಿದೆ, ಇದು ನನ್ನ ಪಾಲಿಗೆ ಇನ್ನಷ್ಟು ವಿಶೇಷವಾಗಿದೆ.ಗುರುಪೂರ್ಣಿಮೆಯ ಶುಭ ಸಮಯದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳ ಜತೆಗೆ ಸಮಯ ಕಳೆಯುವ ಸುವರ್ಣಾವಕಾಶ ಲಭಿಸಿದೆ.
"ಅವರ ಮಾತುಗಳನ್ನು ಕೇಳಿ ಅವರಿಂದ ಕಲಿಯುವುದು ಸಾಕಷ್ಟಿದೆ. ಅವರ ಆಲೋಚನೆಗಳನ್ನು ಕೇಳುವುದು ಒಂದು ವಿಶೇಷ ಅನುಭವ" ಮೋದಿ ಟ್ವೀಟ್ ಮಾಡಿ ಹೇಳಿದ್ದಾರೆ.
ಮದ್ವಾಚಾರ್ಯರು ಸ್ಥಾಪಿಸಿದ  ದ್ವೈತ ಸಿದ್ದಾಂತದ  ಅಷ್ಟ ಮಠಗಳಲ್ಲಿ ಒಂದಾದ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಬೆಂಗಳೂರಿನಲ್ಲಿ ಪೂರ್ಣಪ್ರಜ ವಿದ್ಯಾಪೀಠದ ಸ್ಥಾಪಕರಾಗಿದ್ದಾರೆ, ಅಲ್ಲಿ ವೇದಾಂತದ ಬಗ್ಗೆ ಅನೇಕ ವಿದ್ವಾಂಸರಿಗೆ ತರಬೇತಿ ನೀಡಲಾಗುತ್ತದೆ. 88 ವರ್ಷದ ಸ್ವಾಮೀಜಿಯನ್ನು "ರಾಷ್ಟ್ರದ ಸನ್ಯಾಸಿ" ಎಂದೂ  ಒಬ್ಬ ಮಹಾನ್ ಸಾಮಾಜಿಕ ಸುಧಾರಕ ಮತ್ತು ರಾಷ್ಟ್ರೀಯವಾದಿ ಎಂದು ಕರೆಯಲಾಗುತ್ತದೆ.
ಮೋದಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರ ವಹಿಸಿಕೊಂಡ ಬಳಿಕ ಸ್ವಾಮೀಜಿ ಅವರನ್ನು ಕರೆದು ಧೈರ್ಯ ಮತ್ತು ಸಹಾನುಭೂತಿಯಿಂದ ಜನರಿಗೆ ಸೇವೆ ಸಲ್ಲಿಸುವಂತೆ ಆಶೀರ್ವದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com