ಕಾಂಗ್ರೆಸ್, ಎನ್ ಸಿಪಿ ಶಾಸಕರು ಶೀಘ್ರ ಬಿಜೆಪಿ ಸೇರ್ಪಡೆ: ಮಹಾ ಬಿಜೆಪಿ ಮುಖ್ಯಸ್ಥ

ಇನ್ನು ಒಂದು ವಾರ ಅಥವಾ 10 ದಿನಗಳಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿಯ ಕೆಲ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ...
ಚಂದ್ರಕಾಂತ್ ಪಾಟೀಲ್
ಚಂದ್ರಕಾಂತ್ ಪಾಟೀಲ್
Updated on
ಸೋಲಾಪುರ್: ಇನ್ನು ಒಂದು ವಾರ ಅಥವಾ 10 ದಿನಗಳಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿಯ ಕೆಲ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮಹರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.
ಇಂದು ಸೋಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿಯ ಹಲವು ಶಾಸಕರು ಒಂದು ವಾರದಲ್ಲಿ ರಾಜೀನಾಮೆ ನೀಡಲಿದ್ದಾರೆ ಎಂದರು.
ಬಿಜೆಪಿ ಸೇರಲಿರುವ ಶಾಸಕರ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಡದ ಬಿಜೆಪಿ ರಾಜ್ಯಾಧ್ಯಕ್ಷ, ಮುಂಬರುವ ದಿನಗಳಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರು ಸಹ ಬಿಜೆಪಿ ಸೇರಿದರೆ ಅಚ್ಚರಿ ಪಡಬೇಕಿಲ್ಲ ಎಂದಿದ್ದಾರೆ.
ಇನ್ನು ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಎನ್ ಸಿಪಿ, ಪ್ರತಿಪಕ್ಷಗಳ ಕ್ಯಾಂಪ್ ನಲ್ಲಿ ಗೊಂದಲ ಸೃಷ್ಟಿಸಲು ಅವರು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com