ನಿನ್ನೆ ದೆಹಲಿಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಶೀಲಾ ದೀಕ್ಷಿತ್ ಅವರು ನಿಧರಾಗಿದ್ದರು. ಈ ಕುರಿತಂತೆ ಶೀಲಾ ಅವರ ಪುತ್ರ ಸಂದೀಪ್ ಅವರಿಗೆ ಭಾವನಾತ್ಮ ಪತ್ರ ಬರೆದಿರುವ ಸೋನಿಯಾ ಗಾಂಧಿ ಅವರು, 'ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಶೀಲಾ ದೀಕ್ಷಿತ್ ಅವರನ್ನು ಎಂದಿಗೂ ಮರೆಯಲಾಗದು. ಶೀಲಾ ಅವರ ನಿಧನದಿಂದ ಪಕ್ಷಕ್ಕೆ ಅಪಾರ ನಷ್ಟವಾಗಿದೆ ಓರ್ವ ಹಿರಿಯಕ್ಕನಂತೆ, ಆತ್ಮೀಯ ಗೆಳತಿಯಂತೆ ಆಕೆ ಸದಾ ನನ್ನ ಬೆಂಬಲಕ್ಕಿದ್ದರು ಅವರನ್ನೂ ಎಂದಿಗೂ ಮರೆಯುವಂತಿಲ್ಲ' ಎಂದು ಪತ್ರದಲ್ಲಿ ಹೇಳಿದ್ದಾರೆ.