ಪ್ರತಿಭಟನಾ ಮೆರವಣಿಗೆಯಲ್ಲಿ ಹಲವು ನಾಯಕರು ಹಾಗೂ ಕಾರ್ಯಕರ್ತರು ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು. ಪ್ರತಿಭಟನಾ ಮೆರವಣಿಗೆ ಪೊಲೀಸ್ ಮಹಾ ನಿರ್ದೇಶಕರ ಕಚೇರಿ ತಲುಪುತ್ತಿದ್ದಂತೆ ಕೆಲವು ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತಳ್ಳಿ ಕಚೇರಿಗೆ ನುಗ್ಗಲು ಯತ್ನಿಸಿದರು. ಅಲ್ಲದೆ ಕೆಲವರು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದರು. ಲಾಠಿ ಚಾರ್ಜ್ ನಲ್ಲಿ ಶಾಸಕ ಎಲ್ಡೊ ಅಬ್ರಹಂ ಸೇರಿದಂತೆ ಹಲವು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.