ತೆಲಂಗಾಣ: ಹುಟ್ಟೂರಿನ 2 ಸಾವಿರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಘೋಷಿಸಿದ ಕೆಸಿಆರ್

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಮ್ಮ ಹುಟ್ಟೂರಾದ ಚಿಂತಾಮಡಕ ಗ್ರಾಮದಲ್ಲಿ ವಾಸಿಸುತ್ತಿರುವ 2 ಸಾವಿರ ಕುಟುಂಬಕ್ಕೆ...
ಕೆ ಚಂದ್ರಶೇಖರ್ ರಾವ್
ಕೆ ಚಂದ್ರಶೇಖರ್ ರಾವ್
Updated on
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಮ್ಮ ಹುಟ್ಟೂರಾದ ಚಿಂತಾಮಡಕ ಗ್ರಾಮದಲ್ಲಿ ವಾಸಿಸುತ್ತಿರುವ 2 ಸಾವಿರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಲಾ 10 ಲಕ್ಷ ರೂಪಾಯಿ ಬ್ಯಾಂಕ್ ಖಾತೆಗೆ ಹಾಕುವುದಾಗಿ ಘೋಷಿಸಿದ್ದಾರೆ.
ಸಿದ್ದಿಪೇಟ್ ಜಿಲ್ಲೆಯ ಚಿಂತಾಮಡಕದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಸಿಆರ್, ಈ ಗ್ರಾಮದಲ್ಲಿ ಜನ್ಮ ಪಡೆದಿರುವ ನಾನು, ಈ ಗ್ರಾಮದಲ್ಲಿ ವಾಸವಿರುವ 2 ಸಾವಿರ ಕುಟುಂಬಸ್ಥರ ಖಾತೆಗೆ ಸರ್ಕಾರದ ವತಿಯಿಂದ ತಲಾ 10 ಲಕ್ಷ ರೂಪಾಯಿ ನೀಡಲು ಉದ್ದೇಶಿಸಿದ್ದೇನೆ. ಈ ಹಣವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸರ್ಕಾರ ನೀಡುವ 10 ಲಕ್ಷ ರೂಪಾಯಿ ಹಣದಲ್ಲಿ ಟ್ರಾಕ್ಟರ್, ಹೊಲ ಸೇರಿದಂತೆ ನೀವು ಏನು ಬೇಕಾದರೂ ಖರೀದಿಸಿ ಎಂದು ಸಿಎಂ ಹೇಳಿದರು.
ಕೆ.ಚಂದ್ರಶೇಖರ್ ರಾವ್ ಅವರ ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 200 ಕೋಟಿಯಷ್ಟು ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದ್ದು, ಇದಕ್ಕೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಕೇವಲ ಮುಖ್ಯಮಂತ್ರಿ ಸ್ವಗ್ರಾಮದ ಜನರಿಗೆ ಅನುಕೂಲ ಮಾಡಿಕೊಟ್ಟರೆ ಸಾಕೇ?, ಈ ಯೋಜನೆ ಪ್ರಾಂತ್ಯದ ಎಲ್ಲ ಜನರಿಗೆ ಸಿಗುವಂತಾಗಬೇಕು. ರಾಜ್ಯದ ಎಲ್ಲ ಜನರಿಗೂ ಅನುಕೂಲವಾಗುವಂತೆ ಯೋಜನೆಗಳನ್ನು ಘೋಷಿಸಬೇಕು ಎಂದು ಬಿಜೆಪಿ ಮುಖಂಡ ಪಿ ಮುರಳೀಧರ್ ರಾವ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com