ಆಕ್ಷೇಪಾರ್ಹ ಹೇಳಿಕೆ: ಅಜಂ ಖಾನ್ ನನ್ನು 5 ವರ್ಷ ಲೋಕಸಭೆಯಿಂದ ಅಮಾನತು ಮಾಡಬೇಕು- ರಮಾದೇವಿ

ಸದನದಲ್ಲಿ ತಮ್ಮ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷದ ಸಂಸದ ಅಜಂಖಾನ್ ಕ್ಷಮೆಯಾಚಿಸುವುದು ಮಾತ್ರವಲ್ಲ, ಐದು ವರ್ಷಗಳ ಕಾಲ ಲೋಕಸಭೆಯಿಂದ ಅಮಾನತ್ತು ಮಾಡಬೇಕೆಂದು ಬಿಜೆಪಿ ಸಂಸದೆ ರಮಾದೇವಿ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: ಸದನದಲ್ಲಿ ತಮ್ಮ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷದ ಸಂಸದ ಅಜಂಖಾನ್  ಕ್ಷಮೆಯಾಚಿಸುವುದು ಮಾತ್ರವಲ್ಲ, ಐದು ವರ್ಷಗಳ ಕಾಲ ಲೋಕಸಭೆಯಿಂದ ಅಮಾನತ್ತು ಮಾಡಬೇಕೆಂದು ಬಿಜೆಪಿ ಸಂಸದೆ ರಮಾದೇವಿ ಹೇಳಿದ್ದಾರೆ.
ಅಜಂಖಾನ್ ಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಮತ್ತು ಐದು ವರ್ಷಗಳ ಕಾಲ ಸದನದಿಂದ ಅಮಾನತು ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. 
ಗುರುವಾರ ತ್ರಿವಳಿ ತಲಾಖ್ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಸ್ಪೀಕರ್ ಅನುಪಸ್ಥಿತಿಯಲ್ಲಿ ಕಲಾಪ ನಡೆಸುತ್ತಿದ್ದ ಬಿಜೆಪಿ ಸಂಸದೆ  ರಮಾದೇವಿಯವರನ್ನು ಉದ್ದೇಶಿಸಿ ಮಾತನಾಡಿದ ಅಜಂ ಖಾನ್, ‘ಆಪ್ ಕೀ ಆಂಖೋ ಮೇ ಆಂಖೇ ಡಾಲ್ ಕೇ ಬಾತ್ ಕರ್ ನೇ ಕಾ ಮನ್ ಕರ್ ತಾ ಹೈ’ (ನಿಮ್ಮ ಕಣ್ಣಲ್ಲಿ ಕಣ್ಣನಿಟ್ಟು ಮಾತನಾಡುವ ಬಯಕೆ ಉಂಟಾಗುತ್ತಿದೆ) ಎಂದು ಹೆಳಿದರು.
ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಸಭಾಧ್ಯಕ್ಷರ ಪೀಠದಲ್ಲಿದ್ದ ರಮಾದೇವಿ ಅವರು ‘ಇದು ಮಾತನಾಡುವ ರೀತಿ ಅಲ್ಲ, ಮತ್ತು ಈ ಮಾತುಗಳನ್ನು ಕಡತದಿಂದ ತೆಗೆದು ಹಾಕಿ’ ಎಂದು ಸೂಚನೆ ಕೊಟ್ಟಿದ್ದರು. ತಕ್ಷಣ ಅಜಂಖಾನ್ ಕ್ಷಮೆಯಾಚಿಸಿದ್ದರೆ ಕ್ಷಮಿಸಬಹುದಿತ್ತು. ಆದರೆ, ಹಾಗೆ ಮಾಡದೆ ಆತ ಹೊರಟು ಹೋದ ಎಂದು ಬಿಹಾರದ ಸಂಸದೆ ಆಗಿರುವ ರಮಾದೇವಿ ಹೇಳಿದ್ದಾರೆ. 
 ಸಂಸತ್ತು ಹಾಗೂ ಎಲ್ಲಾ ಸಂಸದರಿಗೂ ಅಜಂಖಾನ್ ಅಪಮಾನ ಮಾಡಿದ್ದು, ಆ ಮಾತುಗಳನ್ನು  ಕಡತದಿಂದ ತೆಗೆದುಹಾಕಲಾಗಿದೆ.ಆದರೂ, ಆತ ಬರೀ ಕ್ಷಮೆಯಾಚಿಸಿದರೆ ಸಾಲದು 5 ವರ್ಷಗಳ ಕಾಲ ಸದನದಿಂದಲೇ ಅಮಾನತು ಮಾಡಬೇಕು ಎಂದಿದ್ದಾರೆ. 
ಈ ಸಂಬಂಧ ವಿವಿಧ ಪಕ್ಷಗಳ ಸದಸ್ಯರೊಂದಿದಿಗೆ ಸಭೆ ನಡೆಸಿದ ಬಳಿಕ ಸ್ಪೀಕರ್ ಓಂ ಬಿರ್ಲಾ ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಅಜಂಖಾನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಜಂಖಾನ್ ಹೇಳಿಕೆಯನ್ನು ಶುಕ್ರವಾರದ ಕಲಾಪದಲ್ಲಿಯೂ ತೀವ್ರವಾಗಿ ಖಂಡಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com