ಜನರ ನಿರೀಕ್ಷೆಗಳನ್ನು ಅವರ ಬಾಯಿಂದಲೇ ಆಲಿಸುತ್ತೇವೆ. ಜನರು ನಮ್ಮ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನೇರವಾಗಿ ನಮ್ಮೊಂದಿಗೇ ಮಾತನಾಡಬಹುದು ಎಂದು ಮಮತಾ ಬ್ಯಾನರ್ಜಿ ಹೇಳಿದರು. ಅಲ್ಲದೆ ಮುಂದಿನ 100 ದಿನಗಳಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ 1000 ಕ್ಕೂ ಹೆಚ್ಚು ಕಾರ್ಯಕರ್ತರು 10, 000 ಕ್ಕೂ ಹೆಚ್ಚು ಹಳ್ಳಿಗಳಿಗೆ ತೆರಳಿ, ಅಲ್ಲಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಅಲ್ಲೇ ಸಮಯ ಕಳೆದು, ಸಮಸ್ಯೆಗಳನ್ನು ಅರಿಯಲಿದ್ದಾರೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದರು.