ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಭಾರತೀಯ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್ ಸೇನೆ ನಡೆಸಿದ ಅಪ್ರಚೋದಿತ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ರಾಜೌರಿ ಜಿಲ್ಲೆಯ ಸುಂದರ್​ಬಾನಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಭಾರತೀಯ ಯೋಧ ನಾಯಕ್ ಕೃಷನ್ ಲಾಲ್ ಅವರು ಹುತಾತ್ಮರಾಗಿದ್ದಾರೆ ಎಂದು ಸೇನಾ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ಅವರು ತಿಳಿಸಿದ್ದಾರೆ.
ತಂಗಧರ್​ ಮತ್ತು ಕೆರಾನ್​ ವಲಯಗಳಲ್ಲೂ ಕೂಡ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಪಾಕ್ ಸೇನೆಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.
ಬಾಲಾಕೋಟ್​ ದಾಳಿಯಾದಾಗಿನಿಂದ ಪಾಕ್​ ನಿರಂತರವಾಗಿ ಗಡಿಭಾಗಗಳಲ್ಲಿ ಗುಂಡಿನ ದಾಳಿ ನಡೆಸುತ್ತಿದೆ. ಸ್ಫೋಟಕಗಳನ್ನು ಎಸೆಯುತ್ತಿದೆ. ಭಾನುವಾರ ಪೂಂಚ್​ನ ಗಡಿನಿಯಂತ್ರಣಾ ರೇಖೆಯ ಬಳಿ ಇರುವ ಹಳ್ಳಿಗಳ ಬಳಿ ಪಾಕ್​ ನಡೆಸಿದ್ದ ಸಿಡಿಗುಂಡುಗಳ ಸ್ಫೋಟಕ್ಕೆ ಮಹಿಳೆ, 15 ದಿನದ ಹಸುಗೂಸು ಸೇರಿ ಮೂವರು ಗಾಯಗೊಂಡಿದ್ದರು. ಮಗು ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com