ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ವಿಜಯ್ ಮಲ್ಯ, 'ನಾನು ವಿ.ಜಿ ಸಿದ್ದಾರ್ಥ ಅವರೊಂದಿಗೆ ಪರೋಕ್ಷವಾಗಿ ಸಂಬಂಧ ಹೊಂದಿದ್ದೇನೆ. ಅವರೊಬ್ಬ ಒಳ್ಳೆಯ ವ್ಯಕ್ತಿ ಹಾಗೂ ಉತ್ತಮ ಉದ್ಯಮಿ. ಅವರ ಪತ್ರದಲ್ಲಿರೋ ಸಾರಾಂಶ ನೋಡಿ ನನ್ನ ಹೃದಯ ನುಚ್ಚುನಾರಾಯ್ತು. ಸರ್ಕಾರಿ ಏಜೆನ್ಸಿಗಳು ಹಾಗೂ ಬ್ಯಾಂಕ್ ಗಳು ಎಂಥವರನ್ನೂ ಹತಾಶೆಗೆ ದೂಡಿಬಿಡುತ್ತವೆ. ನಾನು ಸಂಪೂರ್ಣ ಸಾಲ ಮರುಪಾವತಿ ಮಾಡುತ್ತೇನೆ ಎಂದರೂ ನನಗೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಹೇಳಿದ್ದಾರೆ.