ಶ್ರೀನಗರ: ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನಲ್ಲಿರುವ ಲಿಡ್ಡರ್ ನದಿಯಲ್ಲಿ ರಾಫ್ಟಿಂಗ್ ಗೆ ತೆರಳಿದ್ದವರ ದೋಣಿ ಮಗುಚಿ ಕೊಚ್ಚಿ ಹೋದ ಪ್ರವಾಸಿಗರನ್ನು ಉಳಿಸಲು ಪ್ರಯತ್ನಿಸಿ ಜೀವ ಕಳೆದುಕೊಂಡ ರೌಫ್ ಅಹ್ಮದ್ ದರ್ ಕುಟಂಬಕ್ಕೆ ಜಮ್ಮು-ಕಾಶ್ಮೀರದ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.