ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ವೈ ಎಸ್ ರಮೇಶ್, ದಮ್ಕಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಜವಾನ ಹುತಾತ್ಮರಾಗಿದ್ದು, ಇತರ ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ, ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ 4ರಿಂದ 5 ನಕ್ಸಲೀಯರು ಹತ್ಯೆಗೀಡಾಗಿದ್ದಾರೆ.