ಜೆಡಿಯು ಎಂದಿಗೂ ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ- ಕೆಸಿ ತ್ಯಾಗಿ

ಜೆಡಿಯು ಎಂದಿಗೂ ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ಕೆ. ಸಿ. ತ್ಯಾಗಿ ಹೇಳಿದ್ದಾರೆ.
ಕೆ ಸಿ ತ್ಯಾಗಿ
ಕೆ ಸಿ ತ್ಯಾಗಿ
Updated on

ಪಾಟ್ನಾ: ಜೆಡಿಯು ಎಂದಿಗೂ ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ಕೆ. ಸಿ. ತ್ಯಾಗಿ ಹೇಳಿದ್ದಾರೆ.

ಎನ್ ಡಿಎ ಕೇಂದ್ರ ಸಂಪುಟದಲ್ಲಿ ಬಿಹಾರಕ್ಕೆ ಕೇವಲ ಒಂದು ಸಚಿವ ಸ್ಥಾನ ನೀಡಿರುವುದರಿಂದ ಅಸಮಾಧಾನಗೊಂಡು ಜೆಡಿಯು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಜೆಡಿಯುನ ಪ್ರಸ್ತಾವವನ್ನು ತಿರಸ್ಕರಿಸಲಾಗಿದೆ. ಆದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದೇ ನಮ್ಮ ಅಂತಿಮ ನಿರ್ಧಾರವಾಗಿದೆ. ಮುಂದೆಯೂ ಕೂಡಾ  ಜೆಡಿಯು ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ ಎಂದು ತ್ಯಾಗಿ ಹೇಳಿದ್ದಾರೆ.

ಇತ್ತೀಚಿಗೆ ನಡೆದ ನೂತನ ಕೇಂದ್ರ ಸಂಪುಟದಲ್ಲಿ ಎನ್ ಡಿಎ ಅಂಗಪಕ್ಷಗಳಾದ  ಜೆಡಿಯು, ರಾಮ್ ವಿಲಾಸ್ ಪಾಸ್ವನ್ ನೇತೃತ್ವದ ಎಲ್ ಜೆಎಸ್ ಪಿ, ಅಕಾಲಿ ದಳ, ಶಿವಸೇನಾ ಹಾಗೂ ಆರ್ ಪಿಐ ಪಕ್ಷಗಳಿಗೆ ತಲಾ ಒಂದು 1 ಸಚಿವ ಸ್ಥಾನವನ್ನು ನೀಡಲಾಗಿದೆ.  ಆದರೆ, ಜೆಡಿಯುಗೆ ಕೇವಲ ಸಚಿವ ಸ್ಥಾನ ನೀಡಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಬಿಹಾರದಲ್ಲಿ ಲೋಕಸಭಾ ಚುನಾವಣೆಯಲ್ಲಿ  ಜೆಡಿಯು 16 , ಬಿಜೆಪಿ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಬಿಹಾರ ಸರ್ಕಾರದಲ್ಲಿ  ಉಪಮುಖ್ಯಮಂತ್ರಿಯಾಗಿದ್ದಾರೆ. ಈಗ ಹೊಸದಾಗಿ ಜೆಡಿಯುನ 8 ಶಾಸಕರನ್ನು ಸಚಿವರನ್ನಾಗಿ ಮಾಡಲಾಗಿದೆ. 
ಆದಾಗ್ಯೂ,  ಬಿಜೆಪಿ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಎಲ್ಲವೂ  ಸುಗಮವಾಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com