ತೆಲಂಗಾಣದ ವರಂಗಲ್ ಜಿಲ್ಲೆಯ ಮುಚಾರ್ಲಾ ನಗರಂ ಪ್ರದೇಶದಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ದ್ವಿಚಕ್ರವಾಹನದಲ್ಲಿ ಚಲಿಸುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದಿದ್ದಾನೆ. ಬಿದ್ದ ಕೂಡಲೆ ಆತ ಬಾವಿಯೊಳಗಿನಿಂದಲೇ ಕೂಗಿಕೊಂಡು, ಕಿರುಚಿದರೂ ಯಾರೂ ಕೇಳಿಸಿಕೊಂಡಿರಲಿಲ್ಲ. ಈತ ಬಿದ್ದ ಬಾವಿಯ ಸಮೀಪ ಜನರು ಓಡಾಟ ಅಷ್ಟೇನೂ ಇರಲಿಲ್ಲ. ಹೀಗಾಗಿ ಆತ ಬಾವಿಗೆ ಬಿದ್ದ ವಿಚಾರ ಯಾರ ಗಮನಕ್ಕೂ ಬಂದಿಲ್ಲ.