ಕೇಂದ್ರಸರ್ಕಾರದ ಈ ವಿವಾದಾತ್ಮಕ ನಡೆಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದ ದಕ್ಷಿಣ ಭಾರತದ ರಾಜ್ಯಗಳ ಹೋರಾಟಕ್ಕೆ ಕೊನೆಗೂ ಜಯ ಸಂದಿದ್ದು, ಈ ಬಾರಿಯೂ ಹಿಂದಿ ಹೇರಿಕೆ ವಿಚಾರದಲ್ಲಿ ದಕ್ಷಿಣದಲ್ಲಿ, ಅದರಲ್ಲೂ ಮುಖ್ಯವಾಗಿ ತಮಿಳುನಾಡಿನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಭಾರತದಲ್ಲಿ ಗಟ್ಟಿ ನೆಲೆ ಕಂಡುಕೊಳ್ಳಲು ಆಡಳಿತಾರೂಢ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಭಾರಿ ಪ್ರಯತ್ನ ನಡೆಸಿತ್ತು. ಆದರೆ, ಹಿಂದಿ–ಹಿಂದೂ–ಹಿಂದುತ್ವದ ಸಂದೇಶವು ಉತ್ತರ ಭಾರತದ ರೀತಿಯಲ್ಲಿ ದಕ್ಷಿಣದಲ್ಲಿ ಪರಿಣಾಮ ಬೀರಿಲ್ಲ. ಹಾಗಾಗಿ, ಭಾಷೆಯ ವಿಚಾರದಲ್ಲಿ ಉಂಟಾದ ವಿವಾದವನ್ನು ತಕ್ಷಣವೇ ಕೇಂದ್ರ ಸರ್ಕಾರವು ಪರಿಹರಿಸಿದೆ ಎನ್ನಲಾಗಿದೆ.