ಅಬ್ದುಲ್ಲಾ ಕುಟ್ಟಿ ಕಾಂಗ್ರೆಸ್ ಪಕ್ಷದಲ್ಲೇ ಇದ್ದುಕೊಂಡು ಮೋದಿ ಪರ ಹೇಳಿಕೆ ನೀಡಿದ್ದು ಇದೇ ಮೊದಲೇನು ಅಲ್ಲ. 2009 ರಲ್ಲೇ ಗುಜರಾತ್ ಮಾದರಿಯ ಅಭಿವೃದ್ಧಿಯನ್ನು ಕೇರಳವೂ ಅನುಸರಿಸಬೇಕೆಂದು ಹೇಳಿಕೆ ನೀಡಿ ಕಾಂಗ್ರೆಸ್ ನ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಮೋದಿಯನ್ನು ಹೊಗಳಿದ್ದು, ಮೋದಿ ಮೇಲೆ ತಮಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.