ಇದೇ ವೇಳೆ ಮಾರಣಾಂತಿಕ ನಿಪಾಹ್ ವೈರಾಣು ಸೋಂಕು ಎದುರಿಸಲು ಕೇರಳ ಸರ್ಕಾರ ಸರ್ವ ಸನ್ನದ್ದ ರೀತಿಯಲ್ಲಿ ಸಿದ್ಧವಾಗಿದ್ದು, ಅಗತ್ಯ ಔಷಧೀಯ ಪರಿಕರಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಶಶಿಕಲಾ ಹೇಳಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಕೇರಳ ಕರಾವಳಿ ತೀರಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಲಿದ್ದು, ಕೇರಳದಲ್ಲಿ ವ್ಯಾಪಕ ಮಳೆ ನಿರೀಕ್ಷಿಸಲಾಗುತ್ತಿದೆ. ಇದರ ನಡುವೆ ನಿಪಾಹ್ ವೈರಾಣು ಸೋಂಕು ಕೇರಳದಲ್ಲಿ ವ್ಯಾಪಕ ಆತಂಕ ಸೃಷ್ಟಿ ಮಾಡಿದೆ.