ನವದೆಹಲಿ:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆಯುಷ್ಮಾನ್ ಭಾರತ್ ಯೋಜನೆಯನ್ನು ದೆಹಲಿಯಲ್ಲಿ ಆಮ್ ಆದ್ಮಿ ಸರ್ಕಾರ ಅನುಷ್ಠಾನಗೊಳಿಸುವುದಿಲ್ಲ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುಮಾರು 2 ಕೋಟಿ ಜನರಿದ್ದಾರೆ. ಈ ಯೋಜನೆ ಕೇವಲ 10 ಲಕ್ಷ ಬಡ ಜನರ ಆರೋಗ್ಯದ ಎಚ್ಚರಿಕೆ ವಹಿಸಲಿದೆ. ಇದನ್ನು ನಾವು ಅನುಷ್ಠಾನಗೊಳಿಸುದಿಲ್ಲ. ದೆಹಲಿ ಸರ್ಕಾರ ಯಾವುದೇ ನೀತಿಯನ್ನು ಆಯ್ಕೆ ಮಾಡಿಕೊಳ್ಳುವುದಿಲ್ಲ, ಶ್ರೀಮಂತ ಅಥವಾ ಬಡವರಿಗೆ ಉಚಿತ ಚಿಕಿತ್ಸೆ ನೀಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ
ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ನಿಲುವನ್ನು ದೆಹಲಿ ಸರ್ಕಾರ ಮರು ಪರಿಶೀಲಿಸಬೇಕೆಂದು ಕೇಂದ್ರ ಸಚಿವ ಹರ್ಷವರ್ಧನ್ ಹೇಳಿಕೆಗೆ ಜೈನ್ ಈ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
Advertisement