ವಿಶ್ವ ಪರಿಸರ ದಿನ: ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಗಳಿಂದ ಪ್ರಕೃತಿ ಸಂದೇಶ

ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣೆಗೆ ಒಗ್ಗೂಡಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಟ್ವೀಟ್ ಸಂದೇಶದ ಮೂಲಕ ಕರೆ ನೀಡಿದ್ದಾರೆ.
ವಿಶ್ವ ಪರಿಸರ ದಿನ : ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಗಳಿಂದ ಪ್ರಕೃತಿ ಸಂದೇಶ
ವಿಶ್ವ ಪರಿಸರ ದಿನ : ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಗಳಿಂದ ಪ್ರಕೃತಿ ಸಂದೇಶ
ನವದೆಹಲಿ: ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣೆಗೆ ಒಗ್ಗೂಡಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಟ್ವೀಟ್ ಸಂದೇಶದ ಮೂಲಕ ಕರೆ ನೀಡಿದ್ದಾರೆ. 
ಪ್ರಕೃತಿಯೊಂದಿಗೆ ಸಮರಸದಿಂದ ಜೀವಿಸುವುದು ಭಾರತೀಯ ಪರಂಪರೆಯಾಗಿದ್ದು, ಹವಾಮಾನ ಬದಲಾವಣೆ ವಿರುದ್ಧ ಹೋರಾಟ ಮತ್ತು ಮುಂದಿನ ಪೀಳಿಗೆಗೆ ಹಸಿರು ಪರಿಸರ ನೀಡಲು ಭಾರತ ಬದ್ಧವಾಗಿದೆ ಎಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ. 
ಪರಿಸರ ಸ್ನೇಹಿ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಅಭಿಯಾನ ಉತ್ತೇಜಿಸಿ ಪರಿಸರ ಸಂರಕ್ಷಣೆಗೆ ಒಗ್ಗೂಡಿ ಕ್ರಮ ಕೈಗೊಳ್ಳಬೇಕು ಎಂದು ಉಪರಾಷ್ಟ್ರಪತಿ ಕರೆ ನೀಡಿದ್ದಾರೆ.
ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆ ಅಗತ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com