ಅತ್ಯಾಚಾರದ ಆರೋಪಿ ಶಾಸಕನನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್!

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅತ್ಯಾಚಾರ ಆರೋಪ ಎದುರಿಸುತ್ತಿರುವ ಶಾಸಕ ಕುಲ್ದೀಪ್ ಸಿಂಗ್ ಸೆಂಗರ್ ನ್ನು ಭೇಟಿ ಮಾಡಿ ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಅತ್ಯಾಚಾರದ ಆರೋಪಿಯನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್!
ಅತ್ಯಾಚಾರದ ಆರೋಪಿಯನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್!
Updated on
ನವದೆಹಲಿ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅತ್ಯಾಚಾರ ಆರೋಪ ಎದುರಿಸುತ್ತಿರುವ ಶಾಸಕ ಕುಲ್ದೀಪ್ ಸಿಂಗ್ ಸೆಂಗರ್ ನ್ನು ಭೇಟಿ ಮಾಡಿ ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. 
ಸಿತಾಪುರ್ ಜಿಲ್ಲೆಯ ಜೈಲಿನಲ್ಲಿ ಸಂಸದ ಸಾಕ್ಷಿ ಮಹಾರಾಜ್ ಅತ್ಯಾಚಾರ ಆರೋಪ ಎದುರಿಸುತ್ತಿರುವ ಆರೋಪಿಯನ್ನು ಭೇಟಿ ಮಾಡಿದ್ದಾರೆ. 
4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕುಲ್ದೀಪ್ ಸಿಂಗ್ ಸೆಂಗರ್,  ತಮ್ಮ ಬಳಿ ಕೆಲಸ ಕೇಳಿಕೊಂಡು ಬಂದಿದ್ದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಎದುರಿಸುತ್ತಿದ್ದಾರೆ. 
ಜೈಲಿನಲ್ಲಿ ಅತ್ಯಾಚಾರ ಆರೋಪಿಯನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಸಾಕ್ಷಿ ಮಹಾರಾಜ್ ನಮ್ಮ ಯಶಸ್ವಿ ಹಾಗೂ ಜನಪ್ರಿಯ ಶಾಸಕ ಕುಲ್ದೀಪ್ ಸೆಂಗರ್ ಅವರು ಕೆಲವು ಸಮಯದಿಂದ ಜೈಲಿನಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ನಾನು ಅವರಿಗೆ ಧನ್ಯವಾದ ಹೇಳಲು ಅವರನ್ನು ಭೇಟಿ ಮಾಡಿದೆ ಎಂದು ಹೇಳಿದ್ದಾರೆ. 
ಜೈಲ್ ಎಸ್ ಪ್ಪಿ ಡಿಸಿ ಮಿಶ್ರಾ ನೀಡಿರುವ ಮಾಹಿತಿಯ ಪ್ರಕಾರ ಸಾಕ್ಷಿ ಮಹಾರಾಜ್ ಶಾಸಕ ಕುಲ್ದೀಪ್ ಸೆಂಗರ್ ರನ್ನು ಕೇವಲ 2 ನಿಮಿಷಗಳ ಕಾಲ ಭೇಟಿ ಮಾಡಿದ್ದರು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com