ವಾಯು ಚಂಡಮಾರುತ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯ

ವಾಯು ಚಂಡಮಾರುತದ ಪರಿಣಾಮವಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಗುಜರಾತ್ ನ 5 ವಿಮಾನ ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯವಾಗಲಿದೆ ಎಂದು ಹೇಳಿದೆ.
ವಾಯು ಚಂಡಮಾರುತ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯ
ವಾಯು ಚಂಡಮಾರುತ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯ
Updated on
ನವದೆಹಲಿ: ವಾಯು ಚಂಡಮಾರುತದ ಪರಿಣಾಮವಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಗುಜರಾತ್ ನ 5 ವಿಮಾನ ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯವಾಗಲಿದೆ ಎಂದು ಹೇಳಿದೆ. 
ಮುಂದಿನ 24 ಗಂಟೆಗಳಲ್ಲಿ ಗುಜರಾತ್ ನ 5 ವಿಮಾನ ನಿಲ್ದಾಣಗಳು ಸ್ಥಗಿತಗೊಳ್ಳಲಿದ್ದು, ವಿಮಾನ ನಿಲ್ದಾಣದ ಮೂಲಸೌಕರ್ಯಗಳಿಗೆ ಚಂಡಮಾರುತದಿಂದ ಉಂಟಾಗುವ ನಷ್ಟವನ್ನು ಹಾಗೂ ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲವನ್ನು ತಡೆಗಟ್ಟಲು ಸೇವೆಗಳನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರ ಹೇಳಿದೆ. 
ಇದೇ ವೇಳೆ ಗುಜರಾತ್ ನಲ್ಲಿ ಸೌರಾಷ್ಟ್ರ ಹಾಗೂ ಕಚ್ ಪ್ರದೇಶದಿಂದ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಇದೇ ವೇಳೆ ರೈಲು ಸೇವೆಗಳಲ್ಲಿಯೂ ವ್ಯತ್ಯಯ ಉಂಟಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com