ಆದಾಗ್ಯೂ, ಕಾಂಗ್ರೆಸ್ ಕಾರ್ಯಾಕಾರಿ ಸಮಿತಿ, ರಾಹುಲ್ ಗಾಂಧಿ ರಾಜೀನಾಮೆಯನ್ನು ತಿರಸ್ಕರಿಸಿದ್ದು, ಅದೇ ಹುದ್ದೆಯಲ್ಲಿ ಮುಂದುವರೆಯುವಂತೆ ನಿರ್ಧಾರ ತೆಗೆದುಕೊಂಡಿದೆ. ಈಗ ಉತ್ತರ ಭಾರತದಲ್ಲಿ ಪಕ್ಷವನ್ನು ಮುನ್ನಡೆಸುವ ನಾಯಕನತ್ತ ಪಕ್ಷ ಎದುರು ನೋಡುತ್ತಿದೆ . ಅನೇಕ ಹಿರಿಯ ನಾಯಕರನ್ನು ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.