ಸಿಎಂ ವಿರುದ್ಧ ಪ್ರತಿಭಟನೆ ಭುಗಿಲೇಳುವುದಕ್ಕೆ ಕಾರಣವಾಗಿದ್ದ ಹಲ್ಲೆ ಪ್ರಕರಾಣದಲ್ಲಿ ಗಾಯಗೊಂಡಿದ್ದ ವೈದ್ಯ ಪರಿಬಹ ಮುಖ್ಯೋಪಾಧ್ಯಾಯ ಅವರ ಆರೋಗ್ಯವನ್ನು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ವೈದ್ಯರು ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾತನಾಡಲು ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಲು ಯತ್ನಿಸಿದೆ, ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.