'ಮಹಾ' ಸಂಪುಟ ವಿಸ್ತರಣೆ: 'ಕೈ' ಕೊಟ್ಟಿದ್ದ ವಿಖೆ ಪಾಟಿಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ!

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಮುಂಬೈ ಭಾರತೀಯ ಜನತಾಪಾರ್ಟಿ ಮುಖ್ಯಸ್ಥ ಆಶೀಸ್ ಶೆಲಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು
ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು
Updated on
ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಮುಂಬೈ ಭಾರತೀಯ ಜನತಾಪಾರ್ಟಿ ಮುಖ್ಯಸ್ಥ ಆಶೀಸ್ ಶೆಲಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರದಲ್ಲಿ ಇಬ್ಬರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ವೇಳೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಸ್ಥಿತರಿದ್ದರು. ಇನ್ನು ಕ್ಯಾಬಿನೆಟ್ ವಿಸ್ತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಾರ್ಯಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ವಸಚಿ ಸಚಿವ ಪ್ರಕಾಶ್ ಮೆಹ್ತಾ ಸೇರಿದಂತೆ 6 ಸಚಿವರು ರಾಜಿನಾಮೆ ನೀಡಿದ್ದಾರೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com