ಆಂಧ್ರ ಪ್ರದೇಶ: ರೈತರಿಗೆ ಹಗಲಿನಲ್ಲಿ 9 ಗಂಟೆ ವಿದ್ಯುತ್ ಪೂರೈಕೆ

ಆಂಧ್ರ ಪ್ರದೇಶದಲ್ಲಿನ ರೈತರಿಗೆ ಹಗಲಿನಲ್ಲಿ 9 ಗಂಟೆ ವಿದ್ಯುತ್ ಪೂರೈಸುವ ಸಂಬಂಧ ಒಂದು ವಾರದೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನಿರ್ದೇಶಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ವಿಜಯವಾಡ:ಆಂಧ್ರ ಪ್ರದೇಶದಲ್ಲಿನ ರೈತರಿಗೆ ಹಗಲಿನಲ್ಲಿ 9 ಗಂಟೆ ವಿದ್ಯುತ್ ಪೂರೈಸುವ 
ಸಂಬಂಧ ಒಂದು ವಾರದೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನಿರ್ದೇಶಿಸಿದ್ದಾರೆ.
ಹಗಲಿನಲ್ಲಿ ರೈತರಿಗೆ 9 ಗಂಟೆಗಳ ವಿದ್ಯುತ್ ಪೂರೈಕೆಯ ಪರಿಣಾಮಕಾರಿ ಅನುಷ್ಠಾನದ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ ಎಂದು ಅವರು ಹೇಳಿದ್ದಾರೆ.
ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಜಗನ್ ಮೋಹನ್ ರೆಡ್ಡಿ, 6,663 ಫೀಡರ್ ಗಳ ಮೂಲಕ ಕೃಷಿ ಹಾಗೂ ದೇಶಿ ವಲಯಗಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ. ಈ ಪೈಕಿ ಶೇ, 60 ರಷ್ಟು 9 ಗಂಟೆ ವಿದ್ಯುತ್  ಪೂರೈಸುವ ಸಾಮರ್ಥ್ಯವನ್ನು ಪಡೆದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. 
ಯಾವುದೇ ತಾಂತ್ರಿಕ ದೋಷಗಳಿದ್ದರೆ ಒಂದು ವಾರದೊಳಗೆ ಬಗೆಹರಿಸಿಕೊಂಡು ಪ್ರಾಯೋಗಿಕವಾಗಿ ಹಗಲಿನ ವೇಳೆಯಲ್ಲಿ  ರೈತರಿಗೆ 9 ಗಂಟೆ ವಿದ್ಯುತ್ ಪೂರೈಕೆ ಯೋಜನೆ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ.
ಅಕ್ರಮ ಮಧ್ಯ ಅಂಗಡಿಗಳನ್ನು ಆದಷ್ಟು ಬೇಗ ತೆರವುಗೊಳಿಸುವಂತೆ ಜಗನ್ ಮೋಹನ್ ರೆಡ್ಡಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com