ಇದರ ಬೆನ್ನಲ್ಲೇ ಇದೇ ವಿಚಾರವಾಗಿ ಭಾರತ ಕೂಡ ಪಾಕಿಸ್ತಾನಕ್ಕೆ ನೇರ ಸಂದೇಶ ಭಯೋತ್ಪಾದನೆ ಕುರಿತು ಪಾಕಿಸ್ತಾನ ಪರಿಶೀಲಿಸಬಹುದಾದ, ಬದಲಾಯಿಸಲಾಗದ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ. ಪಾಕಿಸ್ತಾನದ ಉಗ್ರ ಪ್ರಾಯೋಜಕತ್ವದ ಕುರಿತು ಜಗತ್ತಿಗೇ ತಿಳಿದಿದ್ದು, ಇದೀಗ ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲೇಬೇಕಿದೆ. ಕಣ್ಣೊರೆಸುವ ತಂತ್ರಗಾರಿಕೆ ಇನ್ನು ಮುಂದೆ ನಡೆಯಲಾರದು ಎಂದು ಕೇಂದ್ರ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.