ಪ್ರಜಾ ವೇದಿಕೆ ಕಟ್ಟಡ ಧ್ವಂಸಗೊಳಿಸಲಾಗುವುದು: ಸಿಎಂ ಜಗನ್ ಮೋಹನ್ ರೆಡ್ಡಿ

ಟಿಡಿಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ವಾಗಿ ನಿರ್ಮಾಣವಾಗಿದ್ದ ಪ್ರಜಾ ವೇದಿಕೆ ಕಟ್ಟಡವನ್ನು ಕೆಡವಲಾಗುವುದು ಎಂದು ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ...
ಜಗನ್ ಮೋಹನ್ ರೆಡ್ಡಿ
ಜಗನ್ ಮೋಹನ್ ರೆಡ್ಡಿ
Updated on
ವಿಜಯವಾಡ: ಟಿಡಿಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ವಾಗಿ ನಿರ್ಮಾಣವಾಗಿದ್ದ ಪ್ರಜಾ ವೇದಿಕೆ ಕಟ್ಟಡವನ್ನು ಕೆಡವಲಾಗುವುದು ಎಂದು ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ಚಂದ್ರಬಾಬು ನಾಯ್ಡು ಸಿಎಂ ಆಗಿದ್ದ ವೇಳೆಯಲ್ಲಿ ಆಡಳಿತ ಸಂಬಂಧಿತ ಎಲ್ಲಾ ಕಾರ್ಯಗಳನ್ನು ಇದೇ ಕಟ್ಟಡದಲ್ಲಿ ನಡೆಯುತ್ತಿತ್ತು, ಆದರೆ ಈ ಕಟ್ಟಡ ಅನಧಿಕೃತವಾಗಿ ನಿರ್ಮಾಣವಾಗಿದ್ದು, ಬುಧವಾರ ಅದನ್ನು ದ್ವಂಸಗೊಳಿಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನಿಯಮಗಳನ್ನು ಗಾಳಿಗೆ ತೂರಿ ಕಟ್ಟಡ ನಿರ್ಮಿಸಲಾಗಿದೆ, ಸಿಎಂ ಆಗಿದ್ದ ಚಂದ್ರ ಬಾಬು ನಾಯ್ಡು, ನಿಯಮ ಗಾಳಿಗೆ ತೂರಿ ಕಟ್ಟಡ ಕಟ್ಟಲು ಅವಕಾಶ ಮಾಡಿಕೊಟ್ಟಿದ್ದಾರೆ,. ಒಂದು ವೇಳೆ ಮುಖ್ಯಮಂತ್ರಿಗಳೇ ನಿಯಮ ಉಲ್ಲಂಘಿಸಿದರೇ  ಆಡಳಿತದಲ್ಲಿ ಭ್ರಷ್ಟಾಚಾರ ಎಷ್ಟಿರಬಹುದು ಎಂಬುದನ್ನು ಊಹಿಸಿಕೊಳ್ಳಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com