ಇನ್ನು ಈ ಹಿಂದೆ ಸೇನಾ ಕಾರ್ಯಾಚರಣೆಯಲ್ಲಿ ಸತ್ತಿದ್ದಾನೆ ಎಂದು ಹೇಳಲಾಗಿದ್ದ ಉಗ್ರಗಾಮಿಯೇ ಇಂದಿನ ಗುಂಡಿನ ಕಾಳಗದಲ್ಲಿ ಸೇನಾಧಿಕಾರಿಗಳ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸೇನಾ ಮೂಲಗಳ ಪ್ರಕಾರ ಕಾರ್ಯಾಚರಣೆಯಲ್ಲಿ ಓರ್ವ ಸಿಆರ್ ಪಿಎಫ್ ಇನ್ಸ್ ಪೆಕ್ಟರ್, ನಾಲ್ವರು ಪೊಲೀಸ್ ಅಧಿಕಾರಿಗಳು ಹುತಾತ್ಮರಾಗಿ, ಓರ್ವ ನಾಗರಿಕ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕುಪ್ವಾರದ ಲ್ಯಾಂಗೇಟ್ ಕ್ರಾಲ್ ಗುಂಡ್ ಗ್ರಾಮದಲ್ಲಿ ಈ ಕಾರ್ಯಾಚರಣೆ ನಡೆದಿದೆ.