ಮೈಸೂರಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನೀಡಿದ ಹೇಳಿಕೆಯನ್ನು ಟ್ವೀಟರ್, ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿರುವ ಬಿಜೆಪಿ ನಾಯಕರ ವರ್ತನೆಯನ್ನು ಕಟುವಾಗಿಯೇ ಟೀಕಿಸಿದ ಕುಮಾರಸ್ವಾಮಿ, ದೇಶವನ್ನು ರಕ್ಷಿಸಲು ನಮ್ಮ ಯೋಧರು ಸಮರ್ಥರಿದ್ದಾರೆ. ಆದರೆ ಬಿಜೆಪಿ ನಾಯಕರು ಬೀದಿಗಳಲ್ಲಿ ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಿದ್ದಾರೆ. ದೇಶದ ಒಳಗೆ ಅಶಾಂತಿ ವಾತಾವರಣೆ ಕಲ್ಪಿಸಬೇಡಿ ಎಂದು ಹೇಳಿದ್ದೇನೆ. ಈ ಹೇಳಿಕೆಯನ್ನು ತಿರುಚಿ ಸಮಾಜಿಕ ಜಾಲ ತಾಣಗಳಲ್ಲಿ ಪ್ರಕಟಿಸಿದ್ದಾರೆ. ತಾವು ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಮತ್ತೊಮ್ಮೆ ಪ್ರಶ್ನಿಸಿದ್ದಾರೆ.