ಭಾರತ-ಪಾಕಿಸ್ತಾನದ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ ಬೆನ್ನಲ್ಲೆ ಐಎಎಫ್ ನ ಮುಖ್ಯಸ್ಥ ಬಿಎಸ್ ಧನೋವಾ ಹಾಗೂ ನೌಕಾ ಪಡೆಯ ಮುಖ್ಯಸ್ಥ ಸುನಿಲ್ ಲಾಂಬ ಅವರಿಗೆ ಭದ್ರತೆಯನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ವಾಯುಪಡೆ, ನೌಕಾಪಡೆಯಗಳ ಕಮಾಂಡೋಗಳು ನೀಡುವ ಭದ್ರತೆ, ಕೇಂದ್ರ ಸರ್ಕಾರದಿಂದ ನೀಡಲಾಗುವ ಬಾಹ್ಯ ಭದ್ರತೆಯೂ ಸಹ ಮುಂದುವರೆಯಲಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.