ಭಾರತೀಯ ವಾಯು ಸೇನೆ ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಉಗ್ರರ ಅಡಗು ತಾಣಗಳನ್ನು ದ್ವಂಸ ಮಾಡಿತ್ತು. ಇದನ್ನ ಬೆಂಬಲಿಸಿ ಪಿಗ್ಗಿ ಜೈ ಹಿಂದ್ ಇಂಡಿಯನ್ ಆರ್ಮ್ಡ್ ಫೋರ್ಸ್ ಅಂತ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಅಕ್ಷೇಪ ವ್ಯಕ್ತಪಡಿಸಿರುವ ಪಾಕ್, ಆನ್ ಲೈನ್ ಮೂಲಕ ವಿಶ್ವಸಂಸ್ಥೆಗೆ ದೂರು ನೀಡಿದೆ. ಯುನೆಸೆಫ್ ನ ಸೌಹಾರ್ದಯುತ ರಾಯಭಾರಿಯಾಗಿರೋ ಪ್ರಿಯಾಂಕಾ ಈ ಎರಡೂ ದೇಶಗಳ ನಡುವಿನ ಕಲಹದಿಂದ ದೂರ ಉಳಿಯಬೇಕಿತ್ತು. ಜೊತೆಗೆ ಎರಡೂ ದೇಶಗಳ ನಡುವೆ ಶಾಂತಿ ಏರ್ಪಡಿಸಲು ಮುಂದಾಗಬೇಕಿತ್ತು. ಆದರೆ ಭಾರತದ ಪರವಾಗಿ ಟ್ವೀಟ್ ಮಾಡಿದ್ದಾರೆ. ಹೀಗಾಗಿ ಅವರನ್ನು ರಾಯಭಾರಿ ಹುದ್ದೆಯಿಂದ ಕೆಳಗಿಸಬೇಕು ಎಂದು ಒತ್ತಾಯಿಸಿದೆ.