ಕಾಶ್ಮೀರದಲ್ಲಿನ ಆಂತರಿಕ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಒಐಸಿಯಲ್ಲಿ ಕಾಶ್ಮೀರದಲ್ಲಿನ ಅಕ್ರಮ ಬಂಧನಗಳು ಮತ್ತು ಕಣ್ಮರೆ ವಿರೋಧಿಸಿ ನಿನ್ನೆ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಇದನ್ನು ವಿರೋಧಿಸಿರುವ ಭಾರತ ಕಾಶ್ಮೀರ ಸಂಪೂರ್ಣ ಆಂತರಿಕ ವಿಚಾರವಾಗಿದ್ದು, ಇದರಲ್ಲಿ ಇತರರ ಮಧ್ಯಸ್ಥಿಕೆ ಬೇಡ ಎಂದು ತಿರುಗೇಟು ನೀಡಿದೆ.